ನಾಗಮಂಗಲ: ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ

Update: 2018-01-22 17:45 GMT

ನಾಗಮಂಗಲ,ಜ.22: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಬದಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ನಡೆದಿರುವುದು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ನಂದಿಪುರ ಗ್ರಾಮದ ವೆಂಕಟೇಶ್ ಎಂಬುವರ ಪುತ್ರಿ ವಿನುತ(16) ಎಂಬ 10ನೆ ತರಗತಿ ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ. ಈಕೆ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ರವಿವಾರ ತಡರಾತ್ರಿ ಊಟ ಮಾಡಿ ವಿದ್ಯಾರ್ಥಿನಿ ಮಲಗಿದ್ದಾಳೆ. ಸೋಮವಾರ ಬೆಳಗಿನ ಜಾವ 5 ರ ಸಮಯದಲ್ಲಿ ಎಂದಿನಿಂತೆ ಓದಿಕೊಳ್ಳಲು ಎಲ್ಲ ವಿದ್ಯಾರ್ಥಿಗಳು ನೆಲಮಹಡಿಯ ಹಾಲ್‍ಗೆ ಬಂದಾಗ ಎರಡನೆ ಹಂತಸ್ಥಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣಗಳು ತಿಳಿದಿಲ್ಲ, ಶಾಲೆಯ ಪ್ರಾಂಶುಪಾಲರ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ  ಕೈಗೊಳ್ಳಲಾಗಿದೆ ಎಂದು ಬಿಂಡಿಗನವಿಲೆ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News