ಬಿಜೆಪಿ, ಸಂಘಪರಿವಾರದ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಹಾರೂನ್ ರಶೀದ್

Update: 2018-01-23 09:12 GMT
ಹಾರೂನ್ ರಶೀದ್

ಬಂಟ್ವಾಳ, ಜ. 23: ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಸುನೀಲ್ ಅವರ ನಾಲಗೆಯು ಬಿಜೆಪಿ ಹಾಗೂ ಸಂಘಪರಿವಾರದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಹೇಳಿದ್ದಾರೆ.

"ಈ ಬಾರಿಯ ಬಂಟ್ವಾಳ ವಿಧಾನ ಸಭಾ ಚುನಾವಣೆಯು ಅಲ್ಲಾಹನ ಮತ್ತು ಶ್ರೀರಾಮನ ನಡುವಿನ ಸ್ಪರ್ಧೆಯಾಗಿದೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಸುನೀಲ್ ಕುಮಾರ್ ಅವರ ನಾಲಗೆಯು ಬಿಜೆಪಿ ಹಾಗೂ ಸಂಘಪರಿವಾರದ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಹಾರೂನ್ ರಶೀದ್ ಟೀಕಿಸಿದರು.

ಬಂಟ್ವಾಳ ತಾಲೂಕಿನ ಅತೀ ಸೂಕ್ಷ್ಮ ಪ್ರದೇಶವಾದ ಕಲ್ಲಡ್ಕದಲ್ಲಿ ಜನರು ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ದೂರವಿರಿಸಿ, ಸಾಮರಸ್ಯವನ್ನು ಬಯಸುವ ಈ ಸಂದರ್ಭದಲ್ಲಿ ಇಂತಹ ಕೋಮು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದು ಖಂಡನಾರ್ಹ ಎಂದ ಅವರು, ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ಹಾರೂನ್ ರಶೀದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News