ಹಾಸನ ಜಿಲ್ಲಾಧಿಕಾರಿ ಸಿಂಧೂರಿ ಎತ್ತಂಗಡಿಗೆ ಬ್ರೇಕ್ ?
Update: 2018-01-23 11:59 GMT
ಬೆಂಗಳೂರು, ಜ.23: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಗೊಳಿಸಿರುವ ವಿಚಾರದ ಬಗ್ಗೆ ಚುನಾವಣಾ ಆಯೋಗವು ಆಕ್ಷೇಪ ವ್ಯಕ್ತಪಡಿಸಿದೆ.
ಇದರಿಂದಾಗಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ರದ್ಧಾಗುವ ಸಾಧ್ಯತೆ ಕಂಡು ಬಂದಿದೆ. ಮತದಾರರ ಪಟ್ಟಿ ಪರಿಷ್ಕರಣಗೊಳ್ಳುತ್ತಿರುವ ಈ ಹಂತದಲ್ಲಿ ಜಿಲ್ಲಾಧಿಕಾರಿಗಳ ವರ್ಗಾವಣೆ ಸರಿಯಲ್ಲ. ಯಾವುದೇ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡುವಾಗ ತಮ್ಮ ಗಮನಕ್ಕೆ ತರುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಜುಲೈ 14, 2017ರಂದು ರೋಹಿಣಿ ಸಿಂಧೂರಿ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾಯಿಸಲಾಗಿತ್ತು.