ಕುಂದಾಪುರ: ಅಲ್ಪಸಂಖ್ಯಾತ ಘಟಕಕ್ಕೆ ಬಿ.ಹಾರೂನ್ ಅಧ್ಯಕ್ಷ

Update: 2018-01-23 14:35 GMT

ಕುಂದಾಪುರ, ಜ.23: ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಕುಂದಾಪುರ ಬ್ಲಾಕ್ ಅಧ್ಯಕ್ಷರಾಗಿ ಬಿ.ಹಾರೂನ್ ಅವರನ್ನು ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ಅತ್ರಾಡಿ ಅವರು ನೇಮಿಸಿದ್ದಾರೆ.

ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಚಂದ್ರ ಶೆಟ್ಟಿ ಅವರ ಶಿಪಾರಸ್ಸಿನ ಮೇರೆಗೆ ಈ ಆಯ್ಕೆ ನಡೆದಿದೆ. ಕುಂದಾಪುರ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಬಿ.ಹಾರೂನ್ ಅವರು ಕುಂದಾಪುರ ಪುರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News