ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಸುಪ್ರಿಂ ಕೋರ್ಟ್‌ನಿಂದ ಸಿಬಿಐಗೆ ನೋಟಿಸ್

Update: 2018-01-24 15:55 GMT

ಹೊಸದಿಲ್ಲಿ, ಜ. 24: ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ಸಲ್ಲಿಸಿದ ಮನವಿ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಸಿಬಿಐಗೆ ನೋಟಿಸು ಜಾರಿ ಮಾಡಿದೆ. ಸರ್ವೋಚ್ಚ ನ್ಯಾಯಾಲಯ 1999ರಲ್ಲಿ ತನ್ನನ್ನು ದೋಷಿ ಎಂದು ಪರಿಗಣಿಸಿ ನೀಡಿದ ಆದೇಶ ರದ್ದುಗೊಳಿಸುವಂತೆ ಕೋರಿ ಅಪರಾಧಿ ಪೇರರಿವಾಲನ್ ಮನವಿ ಸಲ್ಲಿಸಿದ್ದಾರೆ.

ಮೂರು ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನಿರ್ದೇಶಿಸಿದೆ ಹಾಗೂ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 21ಕ್ಕೆ ನಿಗದಿಗೊಳಿಸಿದೆ. ವಿಚಾರಣೆ ಸಂದರ್ಭ ಪೇರರಿವಾಲ್ ಅವರ ಪರ ನ್ಯಾಯವಾದಿ ಗೋಪಾಲ್ ಶಂಕರನಾರಾಯಣನ್, ಸರ್ವೋಚ್ಚ ನ್ಯಾಯಾಲಯ 1999ರಲ್ಲಿ ನೀಡಿದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಪೇರರಿವಾಲನ್ ಅರ್ಜಿ ಸಲ್ಲಿಸಿದ್ದಾನೆ. ಸಿಬಿಐ ಇದಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ನ್ಯಾಯಾಲಯದ ಮುಂದೆ ಹೇಳಿದರು. ಈ ಮನವಿಯಲ್ಲಿ ಪೇರರಿವಾಲನ್, ತಾನು 26 ವರ್ಷಗಳಿಂದ ಕಾರಾಗೃಹದಲ್ಲಿ ಕೊಳೆಯುತ್ತಿದ್ದೇನೆ ಎಂದು ಹೇಳಿದ್ದಾನೆ ಎಂದು ಕೂಡ ಅವರು ಹೇಳಿದರು.

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಏಳು ಮಂದಿ ಅಪರಾಧಿಗಳನ್ನು ಬಿಡುಗಡೆಗೊಳಿಸಲು ಒಪ್ಪಿಗೆ ಕೋರಿ ತಮಿಳುನಾಡು ಸರಕಾರ 2016ರಲ್ಲಿ ಬರೆದೆ ಪತ್ರದ ಕುರಿತು ಮೂರು ತಿಂಗಳ ಒಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಮಂಗಳವಾರ ಕೇಂದ್ರ ಸರಕಾರಕ್ಕೆ ನಿರ್ದೇಶಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News