ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಸಂಪೂರ್ಣ ಭಸ್ಮ

Update: 2018-01-28 15:43 GMT

ಚಿಕ್ಕಮಗಳೂರು, ಜ.28: ಚಲಿಸುತ್ತಿದ್ದ ಫೋರ್ಡ್ ಕಾರೊಂದು ಹೊತ್ತಿ ಉರಿದ ಘಟನೆ ಕಡೂರು ತಾಲೂಕಿನ ಪಟ್ಟಣಗೆರೆ ಬಳಿ ಭಾನುವಾರ ಸಂಜೆ ನಡೆದಿದೆ.

ಸಖರಾಯಪಟ್ಟಣದ ಲೋಕೇಶ್ ಎಂಬವರಿಗೆ ಸೇರಿದ ಕಾರು ತರೀಕೆರೆಯಿಂದ ಸಖರಾಯಪಟ್ಟದ ಕಡೆಗೆ ಬರುತ್ತಿತ್ತು. ಈ ವೇಳೆ ಬಾನೆಟ್‍ನ ಮೇಲೆ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಕಾರನ್ನು ನಿಲ್ಲಿಸಿ ಕೆಳಗಿಳಿದಿದ್ದಾರೆ. ಇದರಿಂದಾಗಿ ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ ಅಪಾಯದಿಂದ ಪಾರಾಗಿದ್ದಾರೆ

ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News