ನಿತ್ಯಾನಂದನ ಬಂಧನಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ

Update: 2018-01-29 18:11 GMT

ಚೆನ್ನೈ, ಜ.29:  ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ಬಂಧನದ ಭೀತಿ ಎದುರಾಗಿದೆ.

ನಿತ್ಯಾನಂದ ಅವರು ನ್ಯಾಯಾಲಯದಲ್ಲಿ ಸುಳ್ಳು ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಅವರನ್ನು ಬಂಧಿಸಿ ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಮದ್ರಾಸ್ ಉಚ್ಚ ನ್ಯಾಯಾಲಯದ  ನ್ಯಾಯಮೂರ್ತಿ ಮಾಧವನ್ ಆದೇಶ ನೀಡಿದ್ದಾರೆ.

ಇದೇ ವೇಳೆ ಮೊಬೈಲ್ ಫೋನ್ ನಲ್ಲಿ ನ್ಯಾಯಾಲಯದ ಕಲಾಪವನ್ನು ಚಿತ್ರೀಕರಿಸಿದ ನಿತ್ಯಾನಂದ ಶಿಷ್ಯನ ಕೈಯಲ್ಲಿರುವ ಮೊಬೈಲ್ ನ್ನು ವಶಪಡಿಸಿಕೊಳ್ಳವಂತೆ ನ್ಯಾಯಾಲಯದ ಅದೇಶ ನೀಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News