×
Ad

ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Update: 2018-01-29 23:07 IST

ಬಂಟ್ವಾಳ, ಜ. 29: ತುಂಬೆಯಿಂದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 5 ಲಕ್ಷ ರೂ. ವೆಚ್ಚದ ನೂತನ ಕಾಂಕ್ರೀಟ್ ರಸ್ತೆಯನ್ನು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ಜಯರಾಮ ಸಾಮಾನಿ ಸೋಮವಾರ ಉದ್ಘಾಟಿಸಿದರು. 

ಈ ಸಂದರ್ಭ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಮಾಜಿ ಸದಸ್ಯ ಉಮರ್ ಫಾರೂಕ್, ಪುದು ಗ್ರಾಪಂ ಉಪಾಧ್ಯಕ್ಷ ಹಾಶೀರ್ ಪೇರಿಮಾರ್, ಸದಸ್ಯ ರಮ್ಲಾನ್, ಗಣೇಶ್ ಸಾಲ್ಯಾನ್, ಮೋನಪ್ಪ ಮಜಿ, ಪ್ರವೀಣ್, ದಯಾನಂದ ಪೂಜಾರಿ,  ಇಮ್ತಿಯಾಝ್ ತುಂಬೆ, ಭಾಸ್ಕರ ಕುಲಾಲ್, ನಿಸಾರ್ ತುಂಬೆ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News