ಸಿದ್ದರಾಮಯ್ಯ ಭೇಟಿ ಕೋರಿದ ತಮಿಳುನಾಡು ಮುಖ್ಯಮಂತ್ರಿ

Update: 2018-01-30 16:40 GMT

ಚೆನ್ನೈ,ಜ.30: ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪ್ರಧಾನ ಕಾರ್ಯದರ್ಶಿಯವರ ಭೇಟಿಗೆ ಸಮಯಾವಕಾಶ ಕೋರಿ ಮಂಗಳವಾರ ಪತ್ರವೊಂದನ್ನು ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಳನಿಸ್ವಾಮಿ ಅವರು ಕರ್ನಾಟಕವು ತಕ್ಷಣವೇ ಕಾವೇರಿ ನೀರನ್ನು ಬಿಡುಗಡೆ ಮಾಡಲು ಹಸ್ತಕ್ಷೇಪ ನಡೆಸುವಂತೆ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಕೋರಿದ್ದರು. ರಾಜ್ಯದಲ್ಲಿಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿಯ ತನ್ನ ಜಲಾಶಯಗಳಲ್ಲಿ ನೀರಿಲ್ಲವೆಂಬ ಕಾರಣದಿಂದ ಕರ್ನಾಟಕ ಸರಕಾರವು ತಮಿಳುನಾಡಿನ ಬೇಡಿಕೆಯನ್ನು ಈಗಾಗಲೇ ತಿರಸ್ಕರಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News