ಗಾಂಜಾ ಸೇವನೆ ಆರೋಪ: ಮೂವರು ಸೆರೆ

Update: 2018-02-02 18:49 GMT

ಮಂಗಳೂರು, ಫೆ. 2: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆ ರೈಲ್ವೇ ಹಳಿ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಒಂಭತ್ತುಕೆರೆ ನಿವಾಸಿ ಮುಹಮ್ಮದ್ ಇಕ್ಬಾಲ್(29), ಹಳೆಕೋಟೆಯ ಮುಹಮ್ಮದ್ ಸುಹೈಲ್(21), ಸೂರಿಂಜೆಯ ಮುಹಮದ್ ಶಾಕೀರ್(23) ಬಂಧಿತ ಆರೋಪಿಗಳು. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯಿದೆ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News