ಆಲಂಕಾರು: ಕಾರು ಢಿಕ್ಕಿ; ಬಾಲಕಿಗೆ ಗಾಯ

Update: 2018-02-03 16:44 GMT

ಕಡಬ, ಫೆ.3.  ಕಾರೊಂದು ಢಿಕ್ಕಿಯಾದ ಪರಿಣಾಮ ಶಾಲಾ ಬಾಲಕಿಯೋರ್ವಳು ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರಿನಲ್ಲಿ ಶನಿವಾರ ನಡೆದಿದೆ.

ಗಾಯಾಳುವನ್ನು ಆಲಂಕಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಎಂದು ಗುರುತಿಸಲಾಗಿದೆ.

ಆಕೆ ಶನಿವಾರ ಮಧ್ಯಾಹ್ನ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿಯಾಗಿ ಗಾಯ ಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News