ಪ್ರಧಾನಿ ಮೋದಿ ಸ್ವಾಗತಿಸಲು ಸಿಎಂ ತೆರಳಲ್ಲ

Update: 2018-02-04 07:26 GMT

ಬೆಂಗಳೂರು, ಫೆ.4: ನಗರಕ್ಕೆ ಆಗಮಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸ್ವಾಗತಿಸಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ತೆರಳುವುದಿಲ್ಲ ಎಂಬ ಹೇಳಿಕೆಯನ್ನು ಸಿಎಂ ಕಚೇರಿ ನೀಡಿದೆ.

ರಾಜ್ಯ ಸರಕಾರದ ವತಿಯಿಂದ ಸರಕಾರದ ಸಚಿವರೊಬ್ಬರು ಪ್ರಧಾನ ಮಂತ್ರಿ ಅವರನ್ನು ಸ್ವಾಗತಿಸಲು ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News