ದ್ವೇಷ ಭಾಷಣ: ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲು

Update: 2018-02-04 07:46 GMT

ಹೈದರಾಬಾದ್, ಫೆ,4: ಸಮುದಾಯಗಳ ನಡುವೆ ದ್ವೇಷ ಹರಡಿದ ಆರೋಪದಲ್ಲಿ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ದ್ವೇಷ ಹರಡಿದ ಆರೋಪದಲ್ಲಿ ಈ ಪ್ರಕರಣ ದಾಖಲಾಗಿದೆ. ಶಾಸಕರ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಈ ಕ್ರಮ ಕೈಗೊಳ್ಳಲಾಗಿತ್ತು.

ಬೇರೆ ಸಮುದಾಯದವರು ಏನಾದರೂ ತಪ್ಪು ಮಾಡಿದರೆ ಹಿಂದೂಗಳು ಲಾಠಿಯಂತಹ ಆಯುಧಗಳಿಂದ ಅವರ ಮೇಲೆ ದಾಳಿ ನಡೆಸಬೇಕು ಎಂದು ರಾಜಾ ಸಿಂಗ್ ಹೇಳಿದ್ದರು ಎನ್ನಲಾಗಿದೆ.

ಕಾಸ್ಗಂಜ್ ಹಿಂಸಾಚಾರದ ಬಗ್ಗೆ ರಾಜಾ ಸಿಂಗ್ ಈ ಮಾತುಗಳನ್ನಾಡಿದ್ದರು ಎನ್ನಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News