ಗುಂಡ್ಲುಪೇಟೆ: ಶುದ್ದ ಕುಡಿಯುವ ನೀರು ಘಟಕ ಉದ್ಘಾಟನೆ

Update: 2018-02-04 13:56 GMT

ಗುಂಡ್ಲುಪೇಟೆ,ಫೆ.04: ತಾಲೂಕಿನ ದೊಡ್ಡತುಪ್ಪೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಿರ್ಮಿಸಿದ ಶುದ್ದಕುಡಿಯುವ ನೀರು ಘಟಕವನ್ನು ಸಕ್ಕರೆ ಹಾಗೂ ಸಣ್ಣಕೈಗಾರಿಕೆ ಸಚಿವೆ ಡಾ.ಗೀತಾ ಮಹದೇವಪ್ರಸಾದ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದ ಜನತೆಗೆ ಶುದ್ದಕುಡಿಯುವ ನೀರು ದೊರಕುವಂತೆ ಮಾಡಲು ಸಹಕಾರ ಇಲಾಖೆ ಹಾಗೂ ಹಾಲು ಒಕ್ಕೂಟದಿಂದ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಎಲ್ಲರೂ ಇವುಗಳ ಸದ್ಬಳಕೆ ಮಾಡಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಮಹೇಶ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಹಾಲು ಒಕ್ಕೂಟದ ಅಧಿಕಾರಿಗಳು ಹಾಗೂ ಇತರರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News