ಮುಲ್ಕಿ: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Update: 2018-02-05 16:16 GMT

ಮುಲ್ಕಿ, ಫೆ. 5: ಮುಲ್ಕಿಯ ಕೊಕ್ಕರ್ ಕಲ್ ಪೆಟ್ರೋಲ್ ಪಂಪು ಬಳಿ ಬಸ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.

ಮೃತರನ್ನು ಕಾರ್ನಾಡು ಸಮೀಪದ ಸುಖಾನಂದ ನಗರ ನಿವಾಸಿ ಮಧುಸೂಧನ್ ಕಾಮತ್ (61) ಎಂದು ಗುರುತಿಸಲಾಗಿದೆ. ಮಧುಸೂಧನ್ ಕಾಮತ್‌ ಅವರು ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ತಮ್ಮ ಸ್ಕೂಟರ್ ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆದು, ಸ್ಕೂಟರ್ ಸಮೇತ ಸವಾರನನ್ನು ಸುಮಾರು 100 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದು, ಗಂಭೀರ ಗಾಯಗೊಂಡ ಮಧುಸೂಧನ್ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತರು ಸಿಂಡಿಕೇಟ್ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದು, ನಿವೃತ್ತಿಯ ಜೀವನ ನಡೆಸುತ್ತಿದ್ದರು.

ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News