ವಿಶ್ವಚಾಂಪಿಯನ್ನರಿಗೆ ಅದ್ದೂರಿ ಸ್ವಾಗತ...

Update: 2018-02-05 18:25 GMT

ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿರುವ ಭಾರತದ ಕಿರಿಯ ಕ್ರಿಕೆಟಿಗರು ಇಲ್ಲಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ಬಂದಿಳಿದಾಗ ಅದ್ದೂರಿ ಸ್ವಾಗತ ನೀಡಲಾಯಿತು. ಪೃಥ್ವಿ ಶಾ ನಾಯಕತ್ವದ ಭಾರತ ಕ್ರಿಕೆಟ್ ತಂಡವನ್ನು ಮುಂಬೈ ಕ್ರಿಕೆಟ್ ಸಂಸ್ಥೆ(ಎಂಸಿಎ)ಯ ಹಿರಿಯ ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು.ಕ್ರಿಕೆಟ್ ದಂತಕತೆ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ನಾಲ್ಕನೇ ಬಾರಿ ವಿಶ್ವಕಪ್‌ನ್ನು ಜಯಿಸಿ ದಾಖಲೆ ನಿರ್ಮಿಸಿರುವ ಭಾರತ ತಂಡ ಮಧ್ಯಾಹ್ನ 3:30ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor