ದ.ಕ. ಜಿಲ್ಲೆಯಲ್ಲಿ ಬಿಸಿಯೂಟ ನೌಕರರ ಮುಷ್ಕರ

Update: 2018-02-09 09:53 GMT

ಮಂಗಳೂರು, ಫೆ.9: ಸಿಐಟಿಯು ಅಧೀನದಲ್ಲಿರುವ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದ.ಕ. ಜಿಪಂ ಕಚೇರಿ ಮುಂದೆ ಹಾಗೂ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕು ಕಚೇರಿಯೆದುರು ಶುಕ್ರವಾರ ಧರಣಿ ಮುಷ್ಕರ ನಡೆಯಿತು.

ದ.ಕ.ಜಿಪಂ ಕಚೇರಿ ಮುಂದೆ ನಡೆದ ಧರಣಿಯನ್ನು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಉದ್ಘಾಟಿಸಿದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್, ಮಾಜಿ ಕಾರ್ಪೊರೇಟರ್ ಜಯಂತಿ ಬಿ.ಶೆಟ್ಟಿ ಮಾತನಾಡಿದರು.

ಬಿಸಿಯೂಟ ನೌಕರರಿಗೆ 5 ಸಾವಿರ ರೂ. ವೇತನ ನೀಡಬೇಕು, ಕನಿಷ್ಠ ಕೂಲಿ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಇತ್ಯಾದಿ ಬೇಡಿಕೆಗಳನ್ನು ಧರಣಿನಿರತರು ಮುಂದಿಟ್ಟರು.

‘ಸಮುದಾಯ’ ಸಂಘಟನೆಯ ವಾಸುದೇವ ಉಚ್ಚಿಲ್, ಸಂಘದ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಗಿರಿಜಾ ಮೂಡುಬಿದಿರೆ, ಕೋಶಾಧಿಕಾರಿ ಭವ್ಯಾ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News