ತವರು ಸೇರಿದ ಪತ್ನಿ : ಆತ್ಮಹತ್ಯೆಗೆ ಶರಣಾದ ಪತಿ

Update: 2018-02-10 13:29 GMT

ಶಿವಮೊಗ್ಗ, ಫೆ. 10: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗುವಿನೊಂದಿಗೆ ಪತ್ನಿ ತವರು ಸೇರಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಪತಿಯೋರ್ವ ನೀರಿನ ಕಟ್ಟೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ. 

ಸುಬ್ರಹ್ಮಣ್ಯ (30) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ. ಇವರು 10 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕಳೆದ ಏಳು ವರ್ಷಗಳ ಹಿಂದೆ ಪತ್ನಿಯು ಮಗುವಿನೊಂದಿಗೆ ತವರು ಮನೆ ಸೇರಿದ್ದು, ಮತ್ತೆ ಪತಿ ಮನೆಗೆ ಹಿಂದಿರುಗಿರಲಿಲ್ಲ.

ಇದರಿಂದ ಮನನೊಂದು ಮದ್ಯ ವ್ಯಸನಕ್ಕೆ ತುತ್ತಾಗಿದ್ದ ಸುಬ್ರಹ್ಮಣ್ಯ, ಇತ್ತೀಚೆಗೆ ಮನೆ ತೊರೆದಿದ್ದರು. ಇವರ ಶವವು ತೋಟವೊಂದರ ನೀರಿನ ಕಟ್ಟೆಯಲ್ಲಿ ಭಾಗಶಃ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಪ್ರಕರಣದಡಿ ಕೇಸ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News