ಯೆನೆಪೊಯ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ
Update: 2018-02-10 14:29 GMT
ಮಂಗಳೂರು, ಫೆ. 10: ಬಲ್ಮಠದ ಯೆನೆಪೊಯ ಕಾಲೇಜಿನಲ್ಲಿ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ತರಬೇತಿ ಇತ್ತೀಚೆಗೆ ನಡೆಯಿತು.
ತರಬೇತುದಾರರಾಗಿ ಪ್ರಸ್ತುತ ಎನ್.ಐ.ಟಿ.ಕೆ.ಯಲ್ಲಿ ಪಿ.ಎಚ್.ಡಿ ಮಾಡುತ್ತಿರುವ ದೀಕ್ಷಾ ಸಂಜಯ್ ಶೆಟ್ಟಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳು ಸಂದರ್ಶನವನ್ನು ಹೇಗೆ ಎದುರಿಸಬೇಕು, ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುವುದು, ಏಕಾಗ್ರತೆ, ನಾಯಕತ್ವ ಮೊದಲಾದ ವಿಷಯಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಜೊಬಿ ಇ.ಸಿ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ಉಪನ್ಯಾಸಕಿ ನೀಕ್ಷಿತ ಶೆಟ್ಟಿ ಅವರು ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಝ್ವಿನ್ ವಂದಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿಯಾದ ಸುಫಿಯಾನ್ ಕಾರ್ಯಕ್ರಮ ನಿರೂಪಿಸಿದರು.