ಭುಗಿಲೆದ್ದ ದಲಿತರ ಆಕ್ರೋಶ...

Update: 2018-02-11 18:24 GMT

ಗ್ರಾಮದೇವತೆ ಜಾತ್ರೆ ವೇಳೆ ಪ್ರಾಣಿ ಬಲಿಗೆ ವಿರೋಧ ಹಾಗೂ ತೇರು ಎಳೆಯುವ ವಿಚಾರಕ್ಕೆ ಸವರ್ಣೀಯರು ನಡೆಸಿದ ದೌರ್ಜನ್ಯದಿಂದ ಆಕ್ರೋಶಗೊಂಡ ದಲಿತರು, ತಮ್ಮ ಮನೆಯಲ್ಲಿದ್ದ ದೇವರ ಫೋಟೊಗಳನ್ನು ಬೀದಿಗೆಸೆದು ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಕೊಂಡಗೂಳಿ ಗ್ರಾಮದಲ್ಲಿ ಗ್ರಾಮದೇವತೆ ದ್ಯಾಮವ್ವನ ಜಾತ್ರೆಯ ತೇರು ಎಳೆಯುವ ವೇಳೆ ಉಂಟಾದ ನೂಕು-ನುಗ್ಗಲು ಜಾತಿ ಸಂಘರ್ಷಕ್ಕೆ ತಿರುಗಿತ್ತು. ಆನಂತರ ದಲಿತ ಮತ್ತು ಸವರ್ಣೀಯರ ಮಧ್ಯೆ ನಡೆದ ಘರ್ಷಣೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.ಇದರಿಂದ ಬೇಸತ್ತ ಗ್ರಾಮಸ್ಥರು ಕಾಲನಿಯಲ್ಲಿ ಸೇರಿ ದಲಿತ ಮುಖಂಡರ ಮುಂದಾಳತ್ವದಲ್ಲಿ ಹತ್ತಾರು ದೇವರ ಫೋಟೊಗಳನ್ನು ಒಟ್ಟಿಗೆ ರಾಶಿ ಹಾಕಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor