ಬೈಕ್‍ಗೆ ಬಸ್ ಢಿಕ್ಕಿ: ವಿದ್ಯಾರ್ಥಿ ಮೃತ್ಯು

Update: 2018-02-14 14:47 GMT

ಮೈಸೂರು,ಫೆ.14: ಖಾಸಗಿ ಶಾಲೆಯ ಬಸ್ ಬೈಕ್‍ಗೆ ಢಿಕ್ಕಿಯಾದ ಪರಿಣಾಮ ಟ್ಯೂಷನ್‍ಗೆ ತೆರಳುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಟೀ.ನರಸೀಪುರ ರಸ್ತೆಯ ಸಿದ್ದಾರ್ಥ ಲೇಔಟ್‍ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತನನ್ನು ವಿದ್ಯಾವಿಕಾಸ ಪ್ರೌಢಶಾಲೆಯ ಹತ್ತನೇ ಕ್ಲಾಸಿನ ವಿದ್ಯಾರ್ಥಿ, ರಾಘವೇಂದ್ರ ನಗರದ ನಿವಾಸಿ ನಿತೀನ್ (16) ಎಂದು ಗುರುತಿಸಲಾಗಿದೆ.

ಈತ ಟ್ಯೂಷನ್‍ಗೆಂದು ಬೆಳಗ್ಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಶಾಲೆಯ ಬಸ್ ಢಿಕ್ಕಿ ಹೊಡೆದಿದೆ. ಈ ವೇಳೆ ತಲೆಗೆ ಏಟುಬಿದ್ದು ತೀವ್ರ ರಕ್ತಸ್ರಾವವಾಗಿದೆ. ಇದರಿಂದ ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಸಿದ್ದಾರ್ಥನಗರ ಸಂಚಾರಿ ಠಾಣೆ ಪೋಲಿಸರು ಭೇಟಿ, ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿದ್ಧಾರ್ಥ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News