ಮಂಡ್ಯ: ಅಪರಿಚಿತ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2018-02-14 18:16 GMT

ಮಂಡ್ಯ, ಫೆ.14: ಮಳವಳ್ಳಿ ತಾಲೂಕು ಪುರದದೊಡ್ಡಿ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಕುಮಾರ್(31) ಸಾವನ್ನಪ್ಪಿದ್ದಾರೆ.

ತೊರೆಕಾಡನಹಳ್ಳಿ ಗ್ರಾಮದ ಕೆಂಪದಾಸೇಗೌಡನ ಪುತ್ರ ಕುಮಾರ್ ಬೆಂಗಳೂರು ನೀರು ಸರಬರಾಜು ಜಲಮಂಡಳಿಯಲ್ಲಿ ವಾಚ್‍ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶಿವರಾತ್ರಿ ಹಬ್ಬದ ಪ್ರಯುಕ್ತ ಕುಮಾರ್ ಅಂತರಹಳ್ಳಿ ಗ್ರಾಮದಲ್ಲಿರುವ ಸಿದ್ದೇಶ್ವರಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಸ್ ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾಗ ಈ ಘಟನೆ ನಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಕುಮಾರ್ ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಹಲಗೂರು ಠಾಣೆ ಪಿಎಸ್‍ಐ ಶ್ರೀಧರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News