ರಾಜ್ಯ ಬಜೆಟ್: ಜಿಲ್ಲೆಯ ಪ್ರಗತಿಗೆ ಪೂರಕ- ಸಚಿವ ರಮಾನಾಥ ರೈ
ಮಂಗಳೂರು, ಫೆ. 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ಕರಾವಳಿಯ ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಲಿದೆ ಎಂದು ಅರಣ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸುತಿವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.
ಜಿಲ್ಲೆಯ ಪ್ರಮುಖ ಮೀನುಗಾರಿಕಾ ಕ್ಷೇತ್ರಕ್ಕೆ ಸಾಕಷ್ಟು ನೆರವು ದೊರಕಿದೆ. ಮೀನುಗಾರರ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಕರಾವಳಿ ತೀರ ಸಂರಕ್ಷಣೆಗೆ 2ನೇ ಹಂತದಲ್ಲಿ 650 ಕೋಟಿ ರೂ. ನೆರವು ಒದಗಿಸಲಾಗಿದೆ. ಮಂಗಳೂರು ಹಳೇ ಬಂದರಿನಲ್ಲಿ 65 ಕೋಟಿ ರೂ. ವೆಚ್ಚದಲ್ಲಿ 300 ಮೀಟರ್ ಉದ್ದ ಕೋಸ್ಟಲ್ ಬರ್ತ್ ನಿರ್ಮಾಣ ಹಾಗೂ ಬಂದರಿನ ಹೂಳೆತ್ತಲು 29 ಕೋಟಿ ರೂ. ವೆಚ್ಚದಲ್ಲಿ 7 ಮೀಟರ್ಗೆ ಹೆಚ್ಚಳವಾಗಲಿದೆ. ದೇವಾಲಯಗಳನ್ನು ಅಭಿವೃದ್ಧಿಪಡಿಸಲು ಬೃಹತ್ ದೇವಾಲಯಗಳ ಪೂರ್ಣಾಭಿವೃದ್ಧಿ ಯೋಜನೆ ಜಾರಿಗೆ ಬರಲಿದೆ. ಇದೇ ರೀತಿ ಜಿಲ್ಲೆಗೆ ಹಲವಾರು ಕೊಡುಗೆಗಳ್ನು ನೀಡಿರುವ ಮುಖ್ಯಮಂತ್ರಿಗಳನ್ನು ಅಭಿನಂದಿಸುವುದಾಗಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ಜಿಲ್ಲೆಯ ನೀರಾವರಿಗೆ ಒತ್ತು: ಸಚಿವ ಯು.ಟಿ. ಖಾದರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಂಡಿಸಿರುವ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಮೂಲಭೂತ ಸೌಲಭ್ಯಗಳಿಗೆ ಒತ್ತು ನೀಡಿದ್ದು, ಜಿಲ್ಲೆಯ ನೀರಾವರಿ ಸಾಮರ್ಥ್ಯವನ್ನು ಸಶಕ್ತೀಕರಣಗೊಳಿಸಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ ಬೋಟ್ ಹೌಸ್, ತೇಲುವ ಉಪಹಾರ ಗೃಹಗಳನ್ನು ಬಜೆಟ್ನಲ್ಲಿ ಪ್ರಸಾತಿಪಿಸಿರುವುದು ಇಲ್ಲಿನ ಪ್ರವಾಸೋದ್ಯಮ ಕ್ಷೇತ್ರವನ್ನು ವೃದ್ಧಿಸಲಿದೆ. ಜಿಲ್ಲೆಯಲ್ಲಿ ಅತ್ಯುನ್ನತ ಭದ್ರತಾ ವ್ಯವಸ್ಥೆಯ ಕಾರಾಗೃಹ ಸುಮಾರು 85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಪಶ್ಚಿಮ ವಾಹಿನಿ ಯೋಜನೆಯಲ್ಲಿ ನೇತ್ರಾವತಿ ನದಿಯಲ್ಲಿ ಕುಡಿಯುವ ನೀರು ಹಾಗೂ ನೀರಾವರಿ ಸೌಲಭ್ಯ ಕಲ್ಪಿಸಲು ಮಂಗಳೂರು ತಾಲೂಕಿನ ಹರೇಕಳ ಮತ್ತು ಅಡ್ಯಾರು ಮಧ್ಯೆ ಸುಮಾರು 174 ಕೋಟಿ ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗಲಿದ್ದು, ಇದು ಜಿಲ್ಲೆಯ ನೀರಾವರಿ ಸಾಮರ್ಥ್ಯವನ್ನು ವೃದ್ಧಿಸಲಿದೆ.
ಆಹಾರ ಇಲಾಖೆಯಲ್ಲಿ ಪಡಿತರ ವಿತರಕರ ಕಮಿಷನ್ ಮೊತತಿವನ್ನು ಪ್ರತೀ ಕ್ವಿಂಟಾಲ್ಗೆ 87 ರೂ.ನಿಂದ 100 ರೂ.ಗಳಿಗೆ ಹೆಚ್ಚಿಸಲಾಗಿದೆ. ಜನಪರ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.