ನಾನು ಶಿವಮೊಗ್ಗ ಟಿಕೆಟ್ ಆಕಾಂಕ್ಷಿ: ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಸ್ಪಷ್ಟನೆ

Update: 2018-02-17 07:00 GMT

ಶಿವಮೊಗ್ಗ, ಫೆ.17: ‘‘ನಾನು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’’ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರನ್ನು ಶಿಕಾರಿಪುರದಲ್ಲಿ ಅವರ ನಿವಾಸದಲ್ಲಿ ಭೇಟಿಯಾಗಿದ್ದ ರುದ್ರೇಗೌಡ ಬೆಂಬಲಿಗರು ಯಾವುದೇ ಕಾರಣಕ್ಕೂ ವಿಪಕ್ಷ ನಾಯಕ ಈಶ್ವರಪ್ಪಗೆ ಟಿಕೆಟ್ ನೀಡಬಾರದು. ಕಳೆದ ಬಾರಿಯ ಚುನಾವಣೆಯಲ್ಲಿ ಅಲ್ಪ ಮತಕ್ಕೆ ಸೋತಿರುವ ರುದ್ರೇಗೌಡರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News