ಮುಂಡಗೋಡ: ಕಬ್ಬಿನ ಗದ್ದೆಗೆ ಬೆಂಕಿ; ಅಪಾರ ನಷ್ಟ

Update: 2018-02-17 11:05 GMT

ಮುಂಡಗೋಡ,ಪೆ.17: ವಿದ್ಯುತ್ ತಂತಿ ಅವಘಡದಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 1 ಲಕ್ಷ ರೂ. ಮೌಲ್ಯದ ಕಬ್ಬು ಬೆಳೆ ಭಸ್ಮವಾಗಿರುವ ಘಟನೆ ಚೌಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಮ್ಯಾನಕೊಪ್ಪ ಗ್ರಾಮದಲ್ಲಿ ನಡೆದಿದೆ.

ದೀಪಾ ಮುರುಳಿಧರ ನಾಯಕ ಎಂಬುವರಿಗೆ ಸೇರಿದ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಹೊಲದ ಹತ್ತಿರ ಹಾದು ಹೋಗಿರುವ ವಿದ್ಯುತ್ ತಂತಿಗಳು ಗಾಳಿ ಬಿಸಿದ ರಭಸಕ್ಕೆ ಒಂದಕ್ಕೊಂದು ತಾಗಿ ಕಬ್ಬಿನ ಗದ್ದೆಗೆ ಬೆಂಕಿ ಹತ್ತಿದೆ. ಇದನ್ನು ಕಂಡ ಅಕ್ಕಪಕ್ಕದ ರೈತರು, ಸಾರ್ವಜನಿಕರು ಹಾಗೂ ಹೊಲದ ಮಾಲಿಕ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿ ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ದಳವನ್ನು ಕರೆಸಿದ್ದಾರೆ. ಅಗ್ನಿಶಾಮಕ ದಳವದರು ಬೆಂಕಿ ನಂದಿಸಿದರೂ ಸುಮಾರು 1 ಲಕ್ಷ ರೂ ಮೌಲ್ಯದ ಕಬ್ಬು ಬೆಂಕಿಗೆ ಆಹುತಿಯಾಗಿದೆ ಎಂದು ಹೇಳಲಾಗುತ್ತಿದೆ
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News