ಆಳ್ವಾಸ್ ಮೀಡಿಯಾ ಬರ್ 2018ಕ್ಕೆ ತೆರೆ; ನಿಟ್ಟೆಕಾಲೇಜ್ ರನ್ನರ್ಸ್‌

Update: 2018-02-17 14:44 GMT

ಮೂಡುಬಿದಿರೆ, ಫೆ. 17: ಇಂದಿನ ಪೀಳಿಗೆ ದೃಶ್ಯ ಮಾಧ್ಯಮದೆಡೆಗಿನ ವ್ಯಾಮೋಹದಿಂದ ಇಲ್ಲವೇ ಹಣ ಗಳಿಸುವುದಕ್ಕಾಗಿ ಪತ್ರಿಕೋದ್ಯಮಕ್ಕೆ ಬರುತ್ತಿದ್ದಾರೆ, ಸೇವಾ ಮನೋಭಾವ ಉಳ್ಳವರ ಸಂಖ್ಯೆಕ್ಷೀಣಿಸುತ್ತಿದೆ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಸಂಚಾಲಕ ಶಶಿಧರ್ ಶೆಟ್ಟಿ ತಿಳಿಸಿದರು.

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಹಾಗೂ ಪದವಿ ಪತ್ರಿಕೋದ್ಯಮ ವಿಭಾಗ ಆಯೋಜಿಸಿದ್ದ ಮೀಡಿಯಾ ಬರ್ 2018ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. 

ಸ್ವಾತಂತ್ರ್ಯ ನಂತರ ಪತ್ರಿಕಾರಂಗ ಪತ್ರಿಕಾ ಉದ್ಯಮವಾಗಿ ರೂಪಾಂತರಗೊಂಡಿದೆ. ಉದ್ಯಮದೆಡೆಗೆ ಸಾಗುತ್ತಾ ನಮ್ಮ ಮಾಧ್ಯಮಗಳು ಸುದ್ದಿ ಮೌಲ್ಯತೆ ಕಳೆದುಕೊಳ್ಳುತ್ತಿವೆ. ನಾವೇ ಮೊದಲು ಸುದ್ದಿ ನೀಡಬೇಕೆಂಬ ಆತುರತೆ, ಯಾವುದೇ ವಿಷಯವನ್ನು ಪರಿಪೂರ್ಣವಾಗಿ ತಿಳಿದುಕೊಳ್ಳುವ ವ್ಯವಧಾನ ಇಲ್ಲದಿರುವುದರಿಂದ ಸಮಸ್ಯೆಗಳು ಉದ್ಭವವಾಗುತ್ತಿದೆ. ಪೂರ್ವಾಗ್ರಹ ಪೀಡಿತರಾಗಿ ಸಾಮಾಜಿಕ ಜವಾಬ್ದಾರಿ ಮರೆತು ಪತ್ರಕರ್ತರು ಎಂದೂ ಕೆಲಸ ಮಾಡಬಾರದು. ಹಾಗೆ ಮಾಡಿದಲ್ಲಿ ಅದು ಉಗ್ರವಾದ ಎನಿಸಿಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತರಾದವರು ಪರಿಸರ ಸಂರಕ್ಷಣೆಯ ಕುರಿತಾದ ಸುದ್ದಿಗಳನ್ನು ಬಿತ್ತರಿಸಬೇಕು. ಪ್ರಾಣಿ-ಪಕ್ಷಿಗಳ ಉಳಿವಿಗೆ ಸುದ್ದಿಗಳ ಮೂಲಕ ಜಾಗೃತಿ ಮೂಡಿಸುವಂಥ ಕಾರ್ಯಗಳು ಅವರಿಂದ ಆಗಬೇಕು. ಕಾನೂನಿನ ಜ್ಞಾನ ನಮ್ಮ ಪಠ್ಯಪುಸ್ತಗಳಲ್ಲಿ ಅಳವಡಿಕೆಯಾಗಬೇಕು. ಇದರಿಂದ ಉತ್ತಮ ಪತ್ರಕರ್ತರನ್ನು ಹಾಗೂ ಪ್ರಜೆಯನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಮುಖ್ಯಅತಿಥಿಯಾಗಿದ್ದ ಪರಿಸರವಾದಿ ದಿನೇಶ್ ಹೊಳ್ಳ ಮಾತನಾಡಿ ಇಂದಿನ ಪರಿಸರ ಸಮಸ್ಯೆಗಳಿಗೆ ನಾವೇ ಕಾರಣೀಭೂತರು. ನಾವು ಕಾಡನ್ನು ವ್ಯಾವಹಾರಿಕವಾಗಿ ನೋಡಲು ಆರಂಭಿಸಿದಾಗಿನಿಂದ ಬರ, ಕ್ಷಾಮ, ಸುನಾಮಿ, ಚಂಡಮಾರುತದಂತಹ ವಿಕೋಪಗಳನ್ನು ಎದುರಿಸುತ್ತಿದ್ದೇವೆ. ಹಾಗಾಗಿ ಪರಿಸರವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲೇಯೇಇದೆಎನ್ನುವುದನ್ನು ಮರೆಯಬಾರದು ಎಂದು ಹೇಳಿದರು.

ರಾಜ್ಯದ ವಿವಿಧೆಡೆಗಳಿಂದ 20 ಕಾಲೇಜುಗಳು ಭಾಗವಹಿಸಿದ್ದ ಈ ರಾಜ್ಯ ಮಟ್ಟದ ಮಾಧ್ಯಮೋತ್ಸವದಲ್ಲಿ ಮಡಿಕೇರಿಯ ಎಫ್.ಎಮ್.ಕೆ.ಎಮ್.ಸಿ ಕಾಲೇಜು ಸಮಗ್ರ ವೀರಾಗ್ರಣಿಯಾಗಿ ಹೊರಹೊಮ್ಮಿತು. ನಿಟ್ಟೆಕಾಲೇಜುರನ್ನರ್-ಅಪ್ ಪಟ್ಟವನ್ನು ಅಲಂಕರಿಸಿತು.

ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಉಪನ್ಯಾಸಕಿ ಶ್ರೀಗೌರಿ ಜೋಶಿ ಮೀಡಿಯಾ ಬರ್ನ ವರದಿ ವಾಚಿಸಿದರು. ಬಿ.ಎ ವಿದ್ಯಾರ್ಥಿನಿ ನಿಧಿ ಪ್ರಸನ್ನಕಾರ್ಯಕ್ರಮವನ್ನು ನಿರೂಪಿಸಿದರು.

ಸಮಾರೋಪ ಸಮಾರಂಭದಲ್ಲಿ ಮೂಡಬಿದಿರೆ ಪ್ರೆಸ್‌ಕ್ಲಬ್‌ನಅಧ್ಯಕ್ಷ ಸೀತಾರಾಮ ಆಚಾರ್ಯ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆಡಾ.ಮೌಲ್ಯ ಜೀವನ್‌ ರಾಮ್ ಮತ್ತಿತ್ತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News