ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ರಿಯಲ್ ಎಸ್ಟೇಟ್ ಏಜೆಂಟ್ ಬಂಧನ
Update: 2018-02-17 14:46 GMT
ಬೆಂಗಳೂರು, ಫೆ.17: ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಏಜೆಂಟ್ಯೊಬ್ಬನನ್ನು ಇಲ್ಲಿನ ಬೆಳ್ಳಂದೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ಎಚ್ಎಸ್ಆರ್ ಲೇಔಟ್ 1ನೆ ಹಂತದ ತನ್ವೀರ್ ಖಾನ್(33) ಎಂಬುವರನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಕೃಷ್ಣಕಾಂತ್ ರೆಡ್ಡಿ ಎಂಬಾತ ತಲೆಮರೆಸಿಕೊಂಡಿರುವುದಾಗಿ ತಿಳಿದುಬಂದಿದೆ.
ಕಟ್ಟಡ ಕುಸಿದ ದಿನವೇ ವಶಕ್ಕೆ ಪಡೆಯಲಾಗಿದ್ದ ಬಿಬಿಎಂಪಿ ಮಹದೇವಪುರ ವಲಯದ ಕಾರ್ಯನಿರ್ವಾಹಕ ಇಂಜಿನಿಯರ್ ಮುನಿರೆಡ್ಡಿ (48) ಅವರ ಬಂಧನವನ್ನು ಅಧಿಕೃತಗೊಳಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.