ಬೆಳ್ತಂಗಡಿ: ಬಿಜೆಪಿ ಹಿಂ. ಮೋರ್ಚಾ ಪ್ರ. ಕಾರ್ಯದರ್ಶಿ ಹುದ್ದೆಯಿಂದ ವಜಾ

Update: 2018-02-17 16:26 GMT

ಬೆಳ್ತಂಗಡಿ, ಫೆ. 17: ಬೆಳ್ತಂಗಡಿ ತಾಲೂಕು ಬಿಜೆಪಿ ಹಿಂದುಳಿದ ಮೋರ್ಚಾದ ಪ್ರ. ಕಾರ್ಯದರ್ಶಿ ಹುದ್ದೆಯಿಂದ ರಾಜೇಶ ಪೂಜಾರಿ ಅವರನ್ನು ವಜಾ ಮಾಡಲಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ರಂಜನ್ ಜಿ. ಗೌಡ ತಿಳಿಸಿದ್ದಾರೆ.

ಬಿಜೆಪಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಜೇಶ ಪೂಜಾರಿಯವರು ಪಕ್ಷದ ನಿರ್ಣಯಕ್ಕೆ ವಿರುದ್ಧವಾಗಿ, ಪಕ್ಷದ ಶಿಸ್ತುನ್ನು ಉಲ್ಲಂಘನೆ ಮಾಡಿರುವುದರಿಂದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂದುಳಿದ ಮೋರ್ಚಾದ ಪ್ರ. ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಲಾಗಿದೆ ಮತ್ತು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಬಿಡುಗಡೆಗೊಳಿಸಲಾಗಿದೆ. ಹಾಗೂ ಪ್ರಾಥಮಿಕ ಸದಸ್ಯತ್ವದಿಂದಲೂ ವಜಾಗೊಳಿಸಲು ತೀರ್ಮಾನಿಸಲಾಗಿ ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News