ಬೆಂಗಳೂರು: ಹಕ್ಕುಪತ್ರಗಳ ವಿತರಣೆಗೆ ಆಗ್ರಹಿಸಿ ಫೆ.19 ರಿಂದ ಧರಣಿ

Update: 2018-02-18 17:08 GMT

ಬೆಂಗಳೂರು, ಫೆ.18: ನಗರದ ಅಂಬೇಡ್ಕರ್ ನಗರಗಳಲ್ಲಿ ಹಾಗೂ ಗ್ರಾಮಂತರ ಪ್ರದೇಶದಲ್ಲಿವಾಸಿಸುತ್ತಿರುವ ದಲಿತರಿಗೆ ಹಕ್ಕುಪತ್ರಗಳನ್ನು ವಿತರಿಸದೇ ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡಿಸಿ ಫೆ.19 ರಿಂದ ನಗರದಪುರಭವನದಿಂದ ಸ್ವಾತಂತ್ರ ಉದ್ಯಾನವನದವರೆಗೂ ಬೃಹತ್ ಜಾಥ ಹಾಗೂ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲು ದಲಿತ ಸಂಘರ್ಷ ಸಮಿತಿ(ಸಮತಾವಾದ) ಮುಂದಾಗಿದೆ.

ಪ್ರಭಾವಿ ರಾಜಕಾರಣಿಗಳು, ಕಾರ್ಪೋರೇಟ್ ಕಂಪೆನಿಗಳು, ಉಳ್ಳವರು, ಸ್ಥಳೀಯ ಪ್ರಭಾವಿಗಳು ದಬ್ಬಾಳಿಕೆ ನಡೆಸಿ ನೂರಾರು ಎಕರೆ ಭೂಮಿಯನ್ನು ಕಬಳಿಸುತ್ತಿದ್ದಾರೆ. ಆದರೆ, ನಿವೇಶನ ರಹಿತರಿಗೆ ಹಾಗೂ ಭೂಮಿಯಿಲ್ಲದವರಿಗೆ ಭೂ ಮತ್ತು ನಿವೇಶ ನೀಡಲು ಕಾನೂನು ತೊಡಕಿದೆ ಎಂದು ಸಬೂಬು ಹೇಳುತ್ತಾರೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಎಚ್.ಮಾರಪ್ಪ ಪ್ರಕಟನೆಯಲ್ಲಿ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಸಿಂಗಸಂದ್ರ ಗ್ರಾಮದ ಅಂಬೇಡ್ಕರ್ ನಗರದಲ್ಲಿ 35 ವರ್ಷಗಳಿಂದ ಸರಕಾರಿ ಜಾಗದಲ್ಲಿ 350 ಕ್ಕೂ ಅಧಿಕ ದಲಿತ ಕುಟುಂಬಗಳಖಿು ಮನೆಗಳನ್ನು ನಿರ್ಮಿಸಿಕೊಂಡಿದ್ದು, ಸರಕಾರ ಇವರಿಗೆ ಹಕ್ಕುಪತ್ರ ನೀಡದೇ ವಂಚಿಸುತ್ತಿದೆ. ದಕ್ಷಿಣ ತಾಲೂಕಿನ ಚಿಕ್ಕಬೇಗೂರು, ಶ್ರೀನಗರ ಗುಟ್ಟೆ ಪ್ರದೇಶದಲ್ಲಿ ಹತ್ತಾರು ವರ್ಷಗಳಿಂದ ಮನೆಗಳನ್ನು ನಿರ್ಮಿಸಿಕೊಂಡಿರುವವರು ಸೇರಿದಂತೆ ಎಲ್ಲರಿಗೂ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರತಿಭಟನಾ ಧರಣಿಯಲ್ಲಿ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ್ ಸ್ವಾಮೀಜಿ, ಹಿರಿಯ ಸಾಹಿತಿ ಚಂಪಾ, ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ, ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಸಿಪಿಎಂ ಮುಖಂಡ ಜಿ.ಎನ್.ನಾಗರಾಜ್, ಸಿಪಿಐ ಮುಖಂಡ ಸಾಥಿ ಸುಂದರೇಶ್, ವಕೀಲ ಡಾ.ಸಿ.ಎಸ್.ದ್ವಾರಕನಾಥ್, ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಚಿಂತಕ ಮೂಡ್ನಕೂಡು ಚಿನ್ನಸ್ವಾಮಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News