ಉಡುಪಿ: ಶಸ್ತ್ರಾಸ್ತ್ರ ಠೇವಣಿಗೆ ಜಿಲ್ಲಾಧಿಕಾರಿ ಸೂಚನೆ
Update: 2018-02-18 17:41 GMT
ಉಡುಪಿ, ಫೆ.18: ವಿಧಾನಸಬಾ ಚುನಾಚಣಾ ಸನ್ನಿಹಿತವಾಗಿರುವುದರಿಂದ ಹಾಗೂ ಎಲ್ಲಾ ಚುನಾವಣಾ ಪೂರ್ವ ಪ್ರಕ್ರಿಯೆಗಳು ಶುರುವಾಗಿರುವುದರಿಂದ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಠಿಯಿಂದ ಶಸ್ತ್ರಾಸ್ತ್ರ ಬಳಕೆಯ ನಿರ್ಬಂಧದ ಆದೇಶವನ್ನು ಹೊರಡಿಸಿದ ನಂತರ ಆತ್ಮ ರಕ್ಷಣೆ ಹಾಗೂ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಎಲ್ಲಾ ಅಧಿಕೃತ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರಗಳನ್ನು ತಮ್ಮ ವಿಳಾಸ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಅಥವಾ ಅಧಿಕೃತವಾಗಿ ಪರವಾನಿಗೆ ಹೊಂದಿರುವ ಡೀಲರ್ ಶಾಪ್ಗಳಲ್ಲಿ ಠೇವಣಿ ಇರಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.