ಸೊರಬ: ಸಿಲಿಂಡರ್ ಕಳ್ಳತನ ಆರೋಪಿಗಳಿಗೆ ಶಿಕ್ಷೆ ಪ್ರಕಟ

Update: 2018-02-19 12:20 GMT

ಸೊರಬ,ಫೆ.19: ಶಾಲೆಯ ಸಿಲಿಂಡರ್ ಕಳ್ಳತನ ಮಾಡಿದ್ದ ಕಳ್ಳರಿಗೆ ನ್ಯಾಯಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಟ್ಟಣದ ನ್ಯಾಯಾಲಯವು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ತಾಲೂಕಿನ ಚಿಟ್ಟೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡಿಗೆ ಕೊಣೆಯ ಬೀಗವನ್ನು ಮುರಿದು ದತ್ತಗುರು ಮತ್ತು ಸೈಯದ್ ದಾದಾ ಪೀರ್ ರವರು ಎರಡು ಸಿಲಿಂಡರ್ ಕಳ್ಳತನ ಮಾಡಿದ್ದರು. ಇವರ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಿಗೆ ನ್ಯಾಯಾಲಯವು ಐ.ಪಿ.ಸಿ ಕಲಂ 457 ಮತ್ತು 380ರ ಅಡಿಯಲ್ಲಿ ಅಪರಾಧಕ್ಕೆ ಒಂದು ವರ್ಷ ಸಾದಾ ಸ್ವರೂಪದ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕ ಸಂಜೀವ್.ಎಸ್.ಜೋಷಿ ಸರ್ಕಾರದ ಪರವಾಗಿ ವಾದ ಮಂಡಿಸಿ ಆರೋಪಿತರಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News