ಲೋಕಾಯುಕ್ತ ಕಾಯ್ದೆಯಡಿ ಸಾರ್ವಜನಿಕರ ದೂರು ಸ್ವೀಕಾರ
ಉಡುಪಿ, ಫೆ.19: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಟಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಫೆ.22ರಂದು ಬೆಳಿಗ್ಗೆ 11ರಿಂದ 12:30ರವರೆಗೆ ಕುಂದಾಪುರ ತಾಲೂಕಿನ ಬೈಂದೂರು ಪ್ರವಾಸಿ ಮಂದಿರ, ಫೆ.23ರಂದು ಬೆಳಗ್ಗೆ 11ರಿಂದ 12:30ರವರೆಗೆ ಕುಂದಾಪುರ ಪ್ರವಾಸಿ ಮಂದಿರ, ಫೆ.24ರಂದು ಬೆಳಿಗ್ಗೆ 11:30 ರಿಂದ 1:00ರವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸಲ್ಲಿಸಬಹುದಾಗಿದೆ.
ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರಪತ್ರ 1 ಮತ್ತು 2ನ್ನು ಪಡೆದು ಅಫೀದವಿತ್ ಮಾಡಿಸಿ, ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಲೋಕಾಯುಕ್ತ ಉಡುಪಿ ಘಟಕದ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭಾಗವಹಿಸಲಿದ್ದಾರೆ.
ಉಡುಪಿ ತಾಲೂಕಿಗೆ ಸಂಬಂಧಪಟ್ಟ ದೂರು ಅರ್ಜಿಗಳನ್ನು ಕಚೇರಿಯಲ್ಲಿ ಸ್ವೀಕರಿಸಲಾಗುವುದು. ಸಾರ್ವಜನಿಕರಿಗೆ ತಮ್ಮ ಸರಕಾರಿ ಕೆಲಸ ಕಾರ್ಯಗಳಲ್ಲಿ ಯಾವುದೇ ತೊಂದರೆಗಳಾದಲ್ಲಿ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಉಡುಪಿ (0820-2527770) ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ, ಉಡುಪಿ (0820-2536661) ಇವರನ್ನು ಸಂಪರ್ಕಿಸುವಂತೆ ಪೊಲೀಸ್ ಉಪಾಧಿಕ್ಷಕರ ಪ್ರಕಟಣೆ ತಿಳಿಸಿದೆ.