ಸಚಿವರ ಬೆಂಬಲಿಗರಿಂದ ಹಲ್ಲೆ ಆರೋಪ: ದೂರು

Update: 2018-02-19 16:55 GMT

ಬೆಂಗಳೂರು, ಫೆ.19: ಕಾಮಗಾರಿಯೊಂದರ ಸಂಬಂಧ ಕೃಷಿ ಸಚಿವ ಸಚಿವ ಕೃಷ್ಣಬೈರೇಗೌಡ ಬೆಂಬಲಿಗ ಮುನಿರಾಜು ಎಂಬಾತ ಹಲ್ಲೆಗೈದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತ ಕಾಂತರಾಜು ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ನಗರದ ಕೆಂಪಾಪುರ-ದಾಸರಹಳ್ಳಿ ರಸ್ತೆಯನ್ನು ಕಿರಿದು ಮಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ವಾಗ್ವಾದ ನಡೆದಿದ್ದು, ಬಳಿಕ ಮುನಿರಾಜು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲೂ ಸೆರೆಯಾಗಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರತಿಭಟನೆ: ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ದೂರು ನೀಡಲು ಹೋದಾಗ ದೂರು ಸ್ವೀಕರಿಸಲು ಪೊಲೀಸರು ನಿರಾಕರಿಸಿದ್ದರು. ಈ ಸಂಬಂಧ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಠಾಣೆ ಮುಂದೆ ಪ್ರತಿಭಟನೆ ನಡೆಸಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News