ದೀಪಕ್ ರಾವ್ ಮನೆಗೆ ಅಮಿತ್ ಶಾ ಭೇಟಿ
Update: 2018-02-20 16:34 GMT
ಸುರತ್ಕಲ್, ಫೆ. 20: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಈ ಸಂದರ್ಭ ಬಿಜೆಪಿ ಪಕ್ಷದ ವತಿಯಿಂದ 10 ಲಕ್ಷ ರೂ. ಕುಟುಂಬಕ್ಕೆ ಹಸ್ತಾಂತರಿಸಿ ಧೈರ್ಯ ತುಂಬಿದರು. ಮಾಜಿ ಮುಖ್ಯಮಂತ್ರಿ ಬಿ.ಯಸ್.ಯಡಿಯೂರಪ್ಪ, ಸಂಸದ ನಳಿನ್ ಕುಮಾರ್, ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್, ಡಾ. ಭರತ್ ಶೆಟ್ಟಿ ವೈ, ಸತ್ಯಜಿತ್ ಸುರತ್ಕಲ್, ಸಂಜೀವ ಮಠಂದೂರು ಮತ್ತಿತರ ಈ ಸಂದರ್ಭ ಉಪಸ್ಥಿತರಿದ್ದರು. ಸತ್ಯಜಿತ್ ಅವರು ನಡೆದ ಘಟನೆ ಕುರಿತು ಅಮಿತ್ ಶಾ ಅವರಿಗೆ ಮಾಹಿತಿ ನೀಡಿದರು.