​ಸುಳ್ಯ ವಿದ್ಯಾರ್ಥಿನಿಯ ಹತ್ಯೆಗೆ ಸಚಿವ ಖಾದರ್ ಖಂಡನೆ

Update: 2018-02-20 16:39 GMT

ಮಂಗಳೂರು, ಫೆ. 20: ಸುಳ್ಯದ ಕಾಲೇಜುವೊಂದರ ವಿದ್ಯಾರ್ಥಿನಿಯನ್ನು ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಹತ್ಯೆ ಮಾಡಿದ ಪ್ರಕರಣವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಖಂಡಿಸಿದ್ದಾರೆ.

ಪ್ರಕರಣದಲ್ಲಿ ಒಂದೇ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೈಕಿ ತನ್ನದೇ ಧರ್ಮದ ಸಹಪಾಠಿಯಿಂದ ವಿದ್ಯಾರ್ಥಿನಿಯೊಬ್ಬಳ ಹತ್ಯೆಯಾಗಿದೆ. ಈ ಪ್ರಕರಣವನ್ನು ಗಮನಿಸಿದಾಗ ಜಿಲ್ಲೆಯಲ್ಲಿ ಲವ್ ಜಿಹಾದ್ ಎಂದು ಬೊಬ್ಬೆ ಹೊಡೆಯುತ್ತಿರುವವರು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News