ಶಿವಮೊಗ್ಗ: ರಸ್ತೆ ಅಪಘಾತ; ದಂತ ವೈದ್ಯ ಮೃತ್ಯು

Update: 2018-02-20 17:09 GMT

ಶಿವಮೊಗ್ಗ, ಫೆ. 19: ಕೆಎಸ್‍ಆರ್‍ಟಿಸಿ ಬಸ್‍ಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವರು ಮೃತಪಟ್ಟು, ಮತ್ತೋರ್ವರು ಗಾಯಗೊಂಡಿರುವ ಘಟನೆ ನಗರದ ಹೊರವಲಯ ಗಾಡಿಕೊಪ್ಪದ ಬಳಿ ನಡೆದಿದೆ.

ನಗರದ ದುರ್ಗಿಗುಡಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ದಂತ ವೈದ್ಯ ಶ್ರೀನಿವಾಸ್ (48) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರಾವತಿ ದಂತ ವೈದ್ಯ ಕಾಲೇಜ್‍ನಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು, ಇತ್ತೀಚೆಗೆ ಖಾಸಗಿಯಾಗಿ ಕ್ಲಿನಿಕ್ ತೆರೆದಿದ್ದರು. ಪುತ್ರಿಯ ಜೊತೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಈ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News