ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-02-20 17:40 GMT

ಹಿರಿಯಡ್ಕ, ಫೆ.20: ಮದುವೆ ಆಗದ ನೋವು ಹಾಗೂ ವಿಪರೀತ ಮದ್ಯಪಾನದ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಬೈರಂಪಳ್ಳಿ ಗ್ರಾಮದ ಸಾಂತ್ಯಾರಿನ ಕುತ್ಯಾರು ತೋಟದ ಮನೆಯ ಗಣೇಶ ಮೂಲ್ಯ (29) ಎಂಬವರು ನಿನ್ನೆ ಸಂಜೆ ಮನೆಯ ಹಾಡಿಯ ಮರಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವಿಪರೀತ ಕುಡಿಯುವ ಚಟ ಹೊಂದಿದ್ದ ಈದು ಗ್ರಾಮದ ಬನ್ನಡ್ಕದ ಆನಂದ ದೇವಾಡಿಗ (51) ಎಂಬವರು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ರಾತ್ರಿ 8:30ರಿಂದ ಇಂದು ಬೆಳಗ್ಗೆ 6:30ರ ನಡುವಿನ ಅವಧಿಯಲ್ಲಿ ಮನೆಯ ಮುಂಭಾಗದ ಗುಡ್ಡೆಯಲ್ಲಿರುವ ಗೇರುಮರಕ್ಕೆ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News