ರಾಜ್ಯಸಭೆಗೆ ಮಾ.23ರಂದು ಚುನಾವಣೆ

Update: 2018-02-24 12:22 GMT

ಬೆಂಗಳೂರು, ಫೆ.24: ರಾಜ್ಯದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳ 59 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 23ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಡಾ.ಕೆ.ರಹ್ಮಾನ್‌ಖಾನ್, ಬಿಜೆಪಿ ಸದಸ್ಯ ಬಸವರಾಜ ಪಾಟೀಲ್ ಸೇಡಂ, ಆರ್.ರಾಮಕೃಷ್ಣ ಹಾಗೂ ಪಕ್ಷೇತರ ಸದಸ್ಯ ರಾಜೀವ್ ಚಂದ್ರಶೇಖರ್ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಚುನಾವಣೆಗೆ ಮಾ.5ರಂದು ಅಧಿಸೂಚನೆ ಹೊರ ಬೀಳಲಿದ್ದು, ನಾಮಪತ್ರ ಸಲ್ಲಿಸಲು ಮಾ.12 ಅಂತಿಮ ದಿನ. ಮಾ.13ರಂದು ನಾಮಪತ್ರಗಳ ಪರಿಶೀಲನೆ, ಮಾ.15ರಂದು ನಾಮಪತ್ರಗಳನ್ನು ಹಿಂಪಡೆಯಲು ಅಂತಿಮ ದಿನ. ಮಾ.23ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಗೆ ಮತದಾನ ನಡೆಯಲಿದೆ. ಸಂಜೆ 5 ಗಂಟೆಯಿಂದ ಮತಗಳ ಎಣಿಕೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News