ಶಿವರಾಜ್ ಕೊಲೆಗೆ ಕುಮ್ಮಕ್ಕು ನೀಡಿದ ಆರೋಪಿ ಸೆರೆ

Update: 2018-02-24 17:37 GMT

ಮಂಗಳೂರು, ಫೆ.24: ಬೆಂಗ್ರೆ ಗ್ರಾಮದ ಬೊಕ್ಕಪಟ್ಣ ಬೆಂಗ್ರೆ ಎಂಬಲ್ಲಿ ಜ. 20ರಂದು ಕೊಲೆಯಾದ ಶಿವರಾಜ್ ಕರ್ಕೇರ ಕೊಲೆ ಪ್ರಕರಣಕ್ಕೆ ಕುಮ್ಮಕ್ಕು ನೀಡಿ ತಲೆಮರೆಸಿಕೊಂಡಿದ್ದ ಆರೋಪಿ ಸುರತ್ಕಲ್ ಸಮೀಪದ ಸದಾಶಿವ ನಗರ 1ನೆ ಅಡ್ಡರಸ್ತೆಯ ನಿವಾಸಿ ಮನೋಜ್ ಯಾನೆ ಗುಡ್ಡೆಕೊಪ್ಪಳ ಮನೋಜ್ ಯಾನೆ ಮನು (39) ಎಂಬಾತನನ್ನು ಪಣಂಬೂರು ಪೊಲೀಸರು ಮತ್ತು ಮಂಗಳೂರು ಉತ್ತರ ವಿಭಾಗ ರೌಡಿ ನಿಗ್ರಹ ದಳದ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು 10 ಮಂದಿಯನ್ನು ಬಂಧಿಸಿದ್ದಾರೆ. ಕೊಲೆಗೆ ಕುಮ್ಮಕ್ಕು ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯ ಇರುವಿಕೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದರು.

ಕಾರ್ಯಾಚರಣೆಯಲ್ಲಿ ಪಣಂಬೂರು ಇನ್‌ಸ್ಪೆಕ್ಟರ್ ರಫೀಕ್.ಕೆ.ಎಂ, ಮಂಗಳೂರು ಉತ್ತರ ವಿಭಾಗದ ರೌಡಿ ನಿಗ್ರಹ ದಳದ ಅಧಿಕಾರಿ ಸಿಬ್ಬಂದಿ ವರ್ಗ ಪಾಲ್ಗೊಂಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News