ಕೈಕಂಬ: ಕಾರು ಪಲ್ಟಿ; ಚಾಲಕನಿಗೆ ಗಾಯ

Update: 2018-02-25 05:51 GMT

ಬಂಟ್ವಾಳ,  ಫೆ. 25: ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೈಕಂಬ ಸಮೀಪದ ಶಾಂತಿಅಂಗಡಿ ಬಸ್ ಡಿಪೋ ಬಳಿ ರವಿವಾರ ಬೆಳಗ್ಗೆ ನಡೆದಿದೆ.

ಕಾರು ಚಾಲಕನಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಸ್ಥಳೀಯರು ಇಲ್ಲಿನ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಚಾಲಕನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News