ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ: ಡಾ.ನೌಹೆರಾಶೇಖ್

Update: 2018-02-25 18:20 GMT

ಮಂಡ್ಯ, ಫೆ.25: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಲ್ ಇಂಡಿಯಾ ಎಂಪವರ್‍ಮೆಂಟ್ ಪಾರ್ಟಿ ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೆರಾಶೇಖ್ ಹೇಳಿದ್ದಾರೆ.

ಶನಿವಾರ ಸಂಜೆ ನಗರದಲ್ಲಿ ನಡೆದ ಪಕ್ಷದ ಸಮಾವೇಶದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ ಎಂದರು.

ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷದ ಜಿಲ್ಲಾಧ್ಯಕ್ಷೆ ಕಾವೇರಿ ಅವರಿಗೆ ಟಿಕೆಟ್ ನೀಡಲಾಗುವುದು. ಮಹಿಳೆಯರು ಮತ್ತು ಮಹಿಳೆಯರ ಗೌರವಿಸುವ ಪುರಷರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಶ್ನೆಗೆ ಉತ್ತರಿಸಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ಭಾರತೀಯರು ಒಂದೇ. ಎಲ್ಲರಿಗೂ ನ್ಯಾಯ ಒದಗಿಸುವುದು ನಮ್ಮ ಪಕ್ಷದ ಉದ್ದೇಶ. ನವ ಭಾರತ ನಿರ್ಮಾಣಕ್ಕೆ ನಮ್ಮ ಪಕ್ಷದ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News