ಬೆಂಗಳೂರು: ಯುವಕನ ಕೊಲೆ

Update: 2018-02-26 14:08 GMT

ಬೆಂಗಳೂರು, ಫೆ.26: ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಕೊಲೆಗೈದಿರುವ ದುರ್ಘಟನೆ ಇಲ್ಲಿನ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೂಲತಃ ತುಮಕೂರು ನಿವಾಸಿಯಾದ ಸಂತು ಯಾನೆ ಸಂತೋಷ್(28) ಕೊಲೆಯಾದ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.

ಕಾರು ಚಾಲಕ ವೃತ್ತಿ ಮಾಡುತ್ತಿದ್ದ ಸಂತೋಷ್ ದೊಡ್ಡಬಿದರಕಲ್ಲಿನಲ್ಲಿ ವಾಸವಾಗಿದ್ದರು. ಚನ್ನನಾಯಕನಹಳ್ಳಿ ರಸ್ತೆ, ಅನ್ನಪೂರ್ಣೇಶ್ವರಿ ಲೇಔಟ್‌ನ ತಿಪ್ಪೇನಹಳ್ಳಿ ಬಳಿ ರವಿವಾರ ರಾತ್ರಿ ದುಷ್ಕರ್ಮಿಗಳು ಈತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News