ವರ್ಕಾಡಿ: ಶುಹೈಬ್ ಸ್ಮರಣಾರ್ಥ ರಕ್ತದಾನ ಶಿಬಿರ

Update: 2018-02-27 04:26 GMT

ಮಂಜೇಶ್ವರ, ಫೆ.27: ಕಣ್ಣೂರು ಜಿಲ್ಲೆಯ ಮಟ್ಟನ್ನೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಯುವ ಕಾಂಗ್ರೆಸ್ ಮುಖಂಡ ಶುಹೈಬ್ ಸ್ಮರಣಾರ್ಥ ವರ್ಕಾಡಿ ಮಜೀರ್ ಪಳ್ಳದಲ್ಲಿ ಇತ್ತೀಚೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಇಂಡಿಯನ್ ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯು ಬ್ಲಡ್ ಡೋನರ್ಸ್ ಮಂಗಳೂರು, ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಶಿಬಿರವನ್ನು ಕಾಸರಗೋಡು ಜಿಲ್ಲಾ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿಯ ಅಧ್ಯಕ್ಷ ಹರ್ಷಾದ್ ವರ್ಕಾಡಿ ಉದ್ಘಾಟಿಸಿದರು. ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ಅಧ್ಯಕ್ಷ ನಾಸರ್ ಮೊಗ್ರಾಲ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಸಮಾರಂದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮರ್ ಬೋರ್ಕಳ, ಉಪಾಧ್ಯಕ್ಷ ಪಿ.ಸೋಮಪ್ಪ, ಪ್ರಧಾನ ಕಾರ್ಯದರ್ಶಿಗಳಾದ ದಿವಾಕರ್ ಎಸ್.ಜೆ., ವಿನೋದ್ ಕುಮಾರ್ ಪಾವೂರು, ಮಂಡಲ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಮಜಾಲ್, ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಮಮತಾ ದಿವಾಕರ್, ಗ್ರಾಪಂ ಅಧ್ಯಕ್ಷರಾದ ಅಬ್ದುಲ್ ಮಜೀದ್, ಶಂಷಾದ್ ಶುಕೂರ್, ಮಾಜಿ ಅಧ್ಯಕ್ಷ ಬಿ.ಮುಹಮ್ಮದ್ ಕುಂಞಿ, ಕಲ್ಲೂರು ಎಜ್ಯುಕೇಶನಲ್ ಟ್ರಸ್ಟ್ ಅಧ್ಯಕ್ಷ ಇಬ್ರಾಹಿಂ ಹಾಜಿ ಕಲ್ಲೂರು, ಕಾಂಗ್ರೆಸ್ ನೇತಾರರಾದ ಸದಾಶಿವ ಕೆ., ಎಸ್.ಅಬ್ದುಲ್ ಖಾದರ್, ಅಝೀಝ್ ಕುಂಜತ್ತೂರು, ಹಮೀದ್ ಕಣಿಯೂರು, ಶರೀಫ್ ಅರಿಬೈಲು, ಗೋಡ್ವಿನ್ ಡಿಸೋಜ, ರಿಯಾಝ್ ಮೊಗ್ರಾಲ್, ಬ್ಲಡ್ ಡೋನರ್ಸ್ ಮಂಗಳೂರಿನ ಸಿದ್ದೀಕ್ ಮಂಜೇಶ್ವರ, ನವಾಝ್, ಮುಸ್ತಫ ಕೆ.ಸಿ.ರೋಡ್ ಮತ್ತಿತರರು ಭಾಗವಹಿಸಿದ್ದರು.

ಆರಿಫ್ ಮಚ್ಚಂಪಾಡಿ ಸ್ವಾಗತಿಸಿದರು. ಇಕ್ಬಾಲ್ ಕಳಿಯೂರು ವಂದಿಸಿದರು. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರು ಶಿಬಿರಕ್ಕೆ ನೇತೃತ್ವ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News