ಉಡುಪಿ: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ಲೋಕಾರ್ಪಣೆ
Update: 2018-03-01 19:51 IST
ಉಡುಪಿ, ಮಾ.1: ಹೊಸದಾಗಿ ಸ್ಥಾಪನೆಯಾಗಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ ವನ್ನು ಮಾ. 2ರಂದು ಅಪರಾಹ್ನ 1 ಗಂಟೆಗೆ ಬೆಂಗಳೂರಿನ ಟೆನಿಸ್ ಪೆವಿಲಿಯನ್, ಅರಮನೆ ಮೈದಾನ, ವಸಂತನಗರ ಇಲ್ಲಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಲೆಕಾರ್ಪಣೆ ಸಮಾರಂಭ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.