ಅಪರಿಚಿತ ವಾಹನ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
Update: 2018-03-04 22:21 IST
ಉಡುಪಿ, ಮಾ.4: ಕರಾವಳಿ ಸಮೀಪದ ಶಾರದಾ ಇಂಟರ್ನ್ಯಾಷನಲ್ ಹೊಟೇಲ್ ಎದುರು ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಡೆಕಾರು ಕುದ್ರುಕೆರೆಯ ಶಂಕರ ಪೂಜಾರಿ ಎಂಬವರ ಮಗ ಭಾಸ್ಕರ ಪೂಜಾರಿ(50) ಎಂದು ಗುರುತಿಸಲಾಗಿದೆ. ಇವರು ಮಾ.3ರಂದು ರಾತ್ರಿ 11.30ರ ಸುಮಾರಿಗೆ ಸಂತೆಕಟ್ಟೆ ಕಡೆಯಿಂದ ಕರಾವಳಿ ಜಂಕ್ಷನ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.
ಇದರಿಂದ ಗಾಯಗೊಂಡ ಅವರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ವೇಳೆ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.