ವಿವಾದಾತ್ಮಕ ಹೇಳಿಕೆ: ರವಿಶಂಕರ್ ವಿರುದ್ಧ ಪ್ರಕರಣ ದಾಖಲು

Update: 2018-03-09 14:43 GMT

ಹೈದರಾಬಾದ್, ಮಾ.9: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಪ್ರಚೋದನಾತ್ಮಕ  ಹೇಳಿಕೆ ಮೂಲಕ ಮುಸ್ಲಿಮರ ಭಾವನಗಳಿಗೆ ಧಕ್ಕೆ ತಂದಿದ್ದಾರೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಹೈದರಾಬಾದ್ ನಗರ ಪೊಲೀಸ್ ಠಾಣೆಯಲ್ಲಿ ಆರ್ಟ್ ಆಫ್ ಲಿವಿಂಗ್ ಸ್ಥಾಪಕ ಶ್ರೀ ರವಿಶಂಕರ್ ವಿರುದ್ಧ ಪ್ರಕರಣ ದಾಖಲಾಗಿದೆ.

“ಸಲಾಹುದ್ದೀನ್ ಅಫ್ಫಾನ್ ಎಂಬವರು ನೀಡಿದ ದೂರಿನ ಆಧಾರದಲ್ಲಿ ಆರ್ಟ್ ಆಫ್ ಲಿವಿಂಗ್ ಸ್ಥಾಪಕ ರವಿಶಂಕರ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಮೊಘಲ್ಪುರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಆರ್. ದೇವೇಂದರ್ ಹೇಳಿದ್ದಾರೆ.

ಮುಸ್ಲಿಮರ ಧಾರ್ಮಿಕ ಭಾವನೆಗಳು ಹಾಗು ನಂಬಿಕೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಅಯೋಧ್ಯೆ ವಿಚಾರದಲ್ಲಿ ರವಿಶಂಕರ್ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದಾರೆ ಎಂದು ರವಿಶಂಕರ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News