ದಲಿತಪರ ಸಂಘಟನೆಗಳ ಪ್ರತಿಭಟನೆಗೆ ಹೆದರಿ ಹಿಂಬಾಗಿಲಿನಿಂದ ವೇದಿಕೆಗೆ ಆಗಮಿಸಿದರೇ ಕೇಂದ್ರ ಸಚಿವ ಹೆಗಡೆ?

Update: 2018-03-10 10:04 GMT

ಹುಬ್ಬಳ್ಳಿ, ಮಾ.10: ದಲಿತಪರ ಸಂಘಟನೆಗಳ ಪ್ರತಿಭಟನೆಗೆ ಹೆದರಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹಿಂಬಾಗಿಲಿನಿಂದ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ್ದಾರೆ ಎಂದು ವರದಿಯಾಗಿದೆ. 

ಇಲ್ಲಿನ ದೈವಜ್ಞ ಬ್ರಾಹ್ಮಣ ಸಮಾಜ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಸುವರ್ಣಕಾರರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಿಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳನ್ನು ವಿದ್ಯಾನಗದ ದೈವಜ್ಞ ಕಲ್ಯಾಣ ಮಂಟಪದ ಎದುರು ಹಾಕಲಾಗಿದ್ದ ಫ್ಲೆಕ್ಸ್ ಗಳಿಗೆ ಕಪ್ಪು ಮಸಿ ಎರಚಲಾಗಿತ್ತು. ಬೈಕ್ ನಲ್ಲಿ ಬಂದಿದ್ದ ಇಬ್ಬರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

ಒಂದೆಡೆ ಫ್ಲೆಕ್ಸ್ ಗೆ ಮಸಿ ಎರಚಿರುವ ಘಟನೆ, ಇನ್ನೊಂದೆಡೆ ದಲಿತಪರ ಸಂಘಟನೆಗಳ ಪ್ರತಿಭಟನೆಯಿಂದಾಗಿ ಅನಂತ್ ಕುಮಾರ್ ಹೆಗಡೆ ಹಿಂಬಾಗಿಲಿನಿಂದ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದರು. ಬೆಂಗಾವಲು ಪಡೆಯನ್ನು ಬಿಟ್ಟು ಕಾಲ್ನಡಿಗೆಯ ಮೂಲಕ ಸ್ಥಳಕ್ಕೆ ಆಗಮಿಸಿದರು ಎನ್ನಲಾಗಿದೆ. ಬೆಳಗ್ಗೆ 11 ಗಂಟೆಗೆ ಆಗಮಿಸಬೇಕಾಗಿದ್ದ ಸಚಿವರು ಎರಡು ಗಂಟೆ ತಡವಾಗಿ ಕಾರ್ಯಕ್ರಮಕ್ಕೆ ತಲುಪಿದ್ದರು ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News