×
Ad

ಪ್ರಶಾಂತ್ ಎಸ್ ಸುವರ್ಣಗೆ ಪ.ಗೋ.ಪ್ರಶಸ್ತಿ

Update: 2018-03-10 19:23 IST

ಮಂಗಳೂರು, ಮಾ.10: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2017ನೆ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ವಿಜಯವಾಣಿ’ ಪತ್ರಿಕೆಯ ವರದಿಗಾರ ಪ್ರಶಾಂತ್ ಎಸ್. ಸುವರ್ಣ ಸಿದ್ದಕಟ್ಟೆ ಆಯ್ಕೆಯಾಗಿದ್ದಾರೆ.

2017ರ ಜೂ.3ರಂದು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಕೇಳಿಸದೆ ನಮ್ಮ ಕರುಳಿನ ಕೂಗು?’ ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 10,001 ರೂ. ಮತ್ತು ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News