ಹಿಟ್ ಅಂಡ್ ರನ್ ಪ್ರಕರಣ : ಬೈಕ್ ಸವಾರ ಮೃತ್ಯು

Update: 2018-03-10 15:52 GMT

ಶಿವಮೊಗ್ಗ, ಮಾ. 10: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಟಿಜೆ ಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ನಡೆದಿದೆ. 

ಕುಪ್ಪೆ ಗ್ರಾಮದ ನಿವಾಸಿ ಮಹೇಶ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಸೊರಬ ಪಟ್ಟಣದಿಂದ ಟಿಜೆ ಕೊಪ್ಪಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದಾಗ, ಹಿಂಬದಿಯಿಂದ ಆಗಮಿಸಿದ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. 

ತೀವ್ರ ಗಾಯದಿಂದ ರಸ್ತೆಯಲ್ಲಿ ಬಿದ್ದಿದ್ದ ಇವರನ್ನು ಸಾರ್ವಜನಿಕರು ಸೊರಬ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಅಸುನೀಗಿದ್ದಾರೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತ ನಡೆಸಿ ಪರಾರಿಯಾದ ವಾಹನ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News