ರಾಜ್ಯಸಭಾ ಚುನಾವಣೆ: ಹನುಮಂತಯ್ಯ, ಚಂದ್ರಶೇಖರ್, ನಸೀರ್ ಹುಸೇನ್ ‘ಕಾಂಗ್ರೆಸ್ ಅಭ್ಯರ್ಥಿಗಳು’

Update: 2018-03-23 15:19 GMT
ನಸೀರ್ ಹುಸೇನ್, ಡಾ.ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್

ಬೆಂಗಳೂರು, ಮಾ. 11: ರಾಜ್ಯಸಭಾ ಚುನಾವಣೆಗೆ ಡಾ.ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ನಸೀರ್ ಹುಸೇನ್ ಅವರನ್ನು ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಪ್ರಕಟಿಸಿದೆ.

ಇದೇ ತಿಂಗಳ 23ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮಾ.12 ಕೊನೆಯ ದಿನವಾಗಿದೆ. ಹೀಗಾಗಿ ಮೂವರು ಅಭ್ಯರ್ಥಿಗಳು ನಾಳೆಯೇ ವಿಧಾನಸೌಧದಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭಾ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಕೆಪಿಸಿಸಿ ಉಪಾಧ್ಯಕ್ಷ ಡಾ.ಎಲ್.ಹನುಮಂತಯ್ಯ ದಲಿತ ಸಮುದಾಯಕ್ಕೆ ಸೇರಿದ್ದು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಚಂದ್ರಶೇಖರ್ ಒಕ್ಕಲಿಗ ಜನಾಂಗ ಹಾಗೂ ಎಐಸಿಸಿ ವಕ್ತಾರರಾಗಿರುವ ನಾಸೀರ್ ಹುಸೇನ್ ಮುಸ್ಲಿಮ್ ಸಮುದಾಯಕ್ಕೆ ಸೇರಿದ್ದು, ಈ ಮೂವರನ್ನು ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.


                                         

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News